ಟ್ಯಾಗ್: ಕಾಶ್ಮೀರ
-
ಅಂದು ಪುಲ್ವಾಮ- ಹಲವು ಪ್ರಶ್ನೆಗಳಿಗೆ ಉತ್ತರ ಸಿಗಲಿಲ್ಲ; ಇಂದು ಪಹಲ್ಗಾಮ್- ಉತ್ತರ ಸಿಗುತ್ತದೆಯೇ?
ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ನಡೆದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಸನಿಹದಲ್ಲಿರುವ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ 28 ಪ್ರವಾಸಿಗರು ಬಲಿಯಾಗಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಬಲಿಯಾದವರಲ್ಲಿ ಇಬ್ಬರು ಕನ್ನಡಿಗರು, ಇಬ್ಬರು ವಿದೇಶಿಗರು ಎಂದು ವರದಿಯಾಗಿದೆ. ಈ ರೀತಿಯ ದಾಳಿಗಳು ನಡೆದಾಗ ಜನರಿಂದ, ರಾಜಕೀಯ ಪಕ್ಷಗಳ ನಾಯಕರಿಂದ ಮುಸ್ಲಿಂ ಉಗ್ರವಾದಿಗಳು ಮತ್ತು ಪಾಕಿಸ್ತಾನದ ವಿರುದ್ದ ಆಕ್ರೋಶಗಳು ವ್ಯಕ್ತವಾಗುತ್ತವೆ. ಹಿಂದುತ್ವವಾದಿಗಳಿಂದ ಇದನ್ನು ಮುಸ್ಲಿಮರ ವಿರುದ್ದ ತಿರುಗಿಸುವ ಪ್ರಯತ್ನವೂ ನಡೆಯುತ್ತದೆ.…
-
ಕಾಶ್ಮೀರದ ಸಂಪತ್ತನ್ನು ದೋಚಲು 370ನೇ ವಿಧಿ ರದ್ದು
2019ರ ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿಯ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಷೇಶ ಸ್ಥಾನಮಾನವನ್ನು ತೆಗೆದು ಹಾಕಿ, 35ಎ ವಿಧಿಯನ್ನು ನಿರರ್ಥಕಗೊಳಿಸಿ, ಅದಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನು ರದ್ದುಗೊಳಿಸಿ, ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿರುವುದನ್ನೂ ಮೋದಿ ಸರ್ಕಾರದ ದೊಡ್ಡ ಸಾಧನೆ, ಎಂದು ಬಿಂಬಿಸಲಾಗಿದೆ. ಆದರೆ, 370ನೇ ವಿಧಿ ರದ್ದುಗೊಳಿಸಿರುವ ನಿಜವಾದ ಉದ್ದೇಶವನ್ನು ಮರೆಮಾಚಲಾಗಿದೆ. ಭಾರತ 1990ರ ದಶಕದಲ್ಲಿ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ (LPG) ನೀತಿಗಳನ್ನು ಒಪ್ಪಿಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ LPG ನೀತಿಗಳನ್ನು…