ಟ್ಯಾಗ್: ವಿದ್ಯುತ್ (ತಿದ್ದುಪಡಿ) ಮಸೂದೆ
-
ಸ್ಮಾರ್ಟ್ ಮೀಟರ್ ಹಗರಣದ ಚರ್ಚೆಯೂ, ಮುಚ್ಚಿಟ್ಟ ಗ್ರಾಹಕರ ಸುಲಿಗೆಯ ನೀತಿಯೂ
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣ ದೊಡ್ಡ ಸುದ್ದಿಯಾಗಿದೆ. ರಾಜಕೀಯ ಪಕ್ಷಗಳು ಈ ಹಗರಣಗದ ಬಗ್ಗೆಯಷ್ಟೇ ಮಾತನಾಡುತ್ತಿವೆ. 2025-26ರ ರಾಜ್ಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ನಾಯಕರೊಬ್ಬರು ಸ್ಮಾರ್ಟ್ ಮೀಟರ್ ಕುರಿತೇ 45 ನಿಮಷಗಳ ಕಾಲ ಮಾತನಾಡಿದರೂ, ಸ್ಮಾರ್ಟ್ ಮೀಟರ್ ಅಳವಡಿಕೆಯ ಉದ್ದೇಶವೇನು? ಆ ನಂತರ, ಗ್ರಾಹಕರು ಅನುಭವಿಸುವ ನೋವೇನು? ಕೃಷಿ ಪಂಪ್ ಸೆಟ್ ಹೊಂದಿರುವ ರೈತರ ಮತ್ತು ಕೃಷಿಯ ಮೇಲಾಗುವ ಪರಿಣಾಮಗಳೇನು? ಈ ಅಂಶಗಳ ಬಗ್ಗೆ ಏನೂ ಮಾತನಾಡಲಿಲ್ಲ. ಸಮವರ್ತಿ ಪಟ್ಟಿಯಲ್ಲಿರುವ ವಿದ್ಯುತ್ ಕ್ಷೇತ್ರದ ರಾಜ್ಯಗಳ ಹಕ್ಕನ್ನು…